ಕರ್ನಾಟಕ ಪೊಲೀಸರಿಗೆ ಹೊಸ ಮಾದರಿಯ ಟೋಪಿ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕ ಪೊಲೀಸರಿಗೆ ಹೊಸ ಮಾದರಿಯ ಟೋಪಿಗೆ ಸಮ್ಮತಿ ಸೂಚಿಸಿದ್ದಾರೆ. ಐದಾರು ರಾಜ್ಯದ ಟೋಪಿಗಳನ್ನು ಪರಿಶೀಲನೆ ಮಾಡಿದ ಸಿಎಂ ತೆಲಂಗಾಣ ರಾಜ್ಯದ ಟೋಪಿಯನ್ನು ಆಯ್ಕೆ ಮಾಡಿದ್ದಾರೆ. ತೆಲಂಗಾಣ ರಾಜ್ಯದ ಟೋಪಿಯನ್ನ ಹೆಡ್ಕಾನ್ಸ್ಟೇಬಲ್ಗೆ ಹಾಕಿಸಿ, ಪರಿಶೀಲನೆ ಮಾಡಿ ಅಂತಿಮಗೊಳಿಸಿದ್ದಾರೆ.
ಕಳೆದ ಅಧಿವೇಶನದಲ್ಲಿ ಶಾಸಕ ಸಿ.ಎನ್ ಮಂಜೇಗೌಡ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವವರಿಗೆ ಒಂದೇ ರೀತಿಯ ಟೋಪಿ ನೀಡಬೇಕೆಂದು ಪ್ರಶ್ನೆ ಮಾಡಿದ್ದರು. ಇದನ್ನು ಪರಿಶೀಲನೆ ನಡೆಸಿ ವರದಿ ನೀಡುವಂತೆ ಗೃಹ ಸಚಿವ ಡಾ.ಪರಮೇಶ್ವರ್ ಅಂದಿನ ಡಿಜಿಐಜಿಪಿ ಅಲೋಕ್ ಮೋಹನ್ಗೆ ಸೂಚಿಸಿದ್ದರು. ಕೆಎಸ್ಆರ್ಪಿ ಉಮೇಶ್ ಕುಮಾರ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿತ್ತು. ಟೋಪಿ ಬದಲಾವಣೆ ಕುರಿತು ಸಿವಿಲ್, ಕೆಎಸ್ಆರ್ಪಿ, ಸಿಎಆರ್, ಡಿಎಆರ್, ಹಾಗೂ ಐಎಸ್ಡಿ ಸೇರಿ ಪೊಲೀಸ್ ಇಲಾಖೆಯ ಎಲ್ಲಾ ವಿಭಾಗಗಳ ಹೆಡ್ಕಾನ್ಸಟೇಬಲ್ ಹಾಗೂ ಕಾನ್ಸಟೇಬಲ್ಗಳಿಂದ ಸಮಿತಿ ಅಭಿಪ್ರಾಯ ಸಂಗ್ರಹಿಸಿತ್ತು, ಅಲ್ಲದೆ ಕೇರಳ, ಮಹಾರಾಷ್ಟ್ರ, ಆಂದ್ರಪ್ರದೇಶ, ತಮಿಳುನಾಡು ಸೇರಿ ಹೊರ ರಾಜ್ಯದ ಪೊಲೀಸರ ಟೋಪಿ ಕುರಿತು ಮಾಹಿತಿ ಕಲೆ ಹಾಕಲಾಗಿತ್ತು. ಈ ಎಲ್ಲಾ ಅಭಿಪ್ರಾಯ ಬಳಿಕ ಮೂರು ಬಾರಿ ಸಭೆ ಸೇರಿ, ಸಮಾಲೋಚನೆ ನಡೆಸಿ ಅಂತಿಮವಾಗಿ ತೆಲಂಗಾಣ ರಾಜ್ಯದ ಟೋಪಿಯನ್ನು ಸಿಎಂ ಸಿದ್ದರಾಮಯ್ಯ ಅಂತಿಮಗೊಳಿಸಿದ್ದಾರೆ.
ಕಾಮೆಂಟ್ ಬಿಡಿ