ಉಡುಪಿ: ತೊಟ್ಟಿಲಿನ ಸೀರೆಯಲ್ಲಿ ಸಿಕ್ಕಿಹಾಕಿಕೊಂಡು ಒಂದು ವರ್ಷದ ಮಗು ಸಾವು
ಉಡುಪಿ: ತೊಟ್ಟಿಲಿನ ಸೀರೆಯಲ್ಲಿ ಸಿಕ್ಕಿಹಾಕಿಕೊಂಡು ಒಂದು ವರ್ಷದ ಮಗು ಸಾವನ್ನಪ್ಪಿದ ಘಟನೆ ಉಡುಪಿಯ ನಿಟ್ಟೂರಿನಲ್ಲಿ ನಡೆದಿದೆ.
ಉಡುಪಿ ಜಿಲ್ಲೆಯ ಪುತ್ತೂರು ಗ್ರಾಮದ ಅಯ್ಯಪ್ಪ ಎಂಬುವರು ಕಳೆದ ಮೂರು ವರ್ಷಗಳಿಂದ ಉಡುಪಿಯಲ್ಲಿ ಕೆಲಸ ಮಾಡುತ್ತಿದ್ದು, ನಿಟ್ಟೂರಿನಲ್ಲಿ ಗಂಗಾಧರ್ ಒಡೆತನದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ಜೂನ್ 4 ರಂದು
ಬೆಳಿಗ್ಗೆ 9.30 ರ ಸುಮಾರಿಗೆ, ಅಯ್ಯಪ್ಪ ತನ್ನ ಪತ್ನಿ ಮತ್ತು ಒಂದುವರ್ಷದ ಮಗಳು ಕಾಳಮ್ಮ ಅವರನ್ನು ಬಟ್ಟೆಯ
ತೊಟ್ಟಿಲಿನಲ್ಲಿ (ಜೋಲಿ) ಮಲಗಿಸಿ ಕೆಲಸಕ್ಕೆ ಹೋಗಿದ್ದರು. ಅವರು ಬೆಳಿಗ್ಗೆ 11.30 ರ ಸುಮಾರಿಗೆ ಮನೆಗೆ ಹಿಂದಿರುಗಿದಾಗ
, ತೊಟ್ಟಿಲಿಗೆ ಕಟ್ಟಿದ್ದ ಸೀರೆ ಕುತ್ತಿಗೆಗೆ ಸುತ್ತಿಕೊಂಡು ಮಗು ಅಸ್ವಸ್ಥ ಸ್ಥಿತಿಯಲ್ಲಿರುವುದನ್ನು ಕಂಡುಬAದಿದೆ.ತಕ್ಷಣ
ಅವರು ಮಗುವನ್ನುಉಡುಪಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿ ವೈದ್ಯರು ಮಗು ಸಾವನ್ನಪ್ಪಿದೆ
ಎಂದು ತಿಳಿಸಿದ್ದಾರೆ.
ವರದಿಗಳ ಪ್ರಕಾರ, ಮಗು ಆಕಸ್ಮಿಕವಾಗಿ ತೊಟ್ಟಿಲಿನಿಂದ ಬಿದ್ದಿರುವುದರಿಂದ ಅಥವಾ ನಿದ್ದೆಯಲ್ಲಿ ಚಲಿಸಿದಾಗ
ತೊಟ್ಟಿಲಿಗೆ ಕಟ್ಟಿದ ಸೀರೆ ಕುತ್ತಿಗೆಗೆ ಸುತ್ತಿಕೊಂಡು ಉಸಿರುಗಟ್ಟಿ ಸಾವನ್ನಪ್ಪಿದೆ ಎನ್ನಲಾಗಿದೆ.ಉಡುಪಿ ನಗರ
ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಕಾಮೆಂಟ್ ಬಿಡಿ