ಪ್ರಖ್ಯಾತ ಆನಂದ್ ಗುರೂಜಿಗೆ ಪ್ರತಿನಿತ್ಯ ಹಣಕ್ಕಾಗಿ ಆರೋಪಿಗಳು ಬ್ಲ್ಯಾಕ್ಮೇಲ್
ಬೆಂಗಳೂರು: ಆನಂದ ಗುರೂಜಿಯ ಕಾರು ಅಡ್ಡಿಗಟ್ಟಿ ಹಣಕ್ಕೆ ಬ್ಲ್ಯಾಕ್ಮೇಲ್ ಹಾಗೂ ಜೀವಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಆನಂದ ಗುರೂಜಿ ಅವರು ಬೆಂಗಳೂರಿನ ಚಿಕ್ಕಜಾಲ ಠಾಣೆಗೆ ದೂರು ನೀಡಿದ್ದು, ಈ ದೂರಿನ ಸಂಬಂಧ ಪೊಲೀಸರು, ಕೃಷ್ಣಮೂರ್ತಿ(ಎ1) ಹಾಗೂ ದಿವ್ಯಾ ವಸಂತ (ಎ2) ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ವಿಡಿಯೋ ಇದೆ ಎಂದು ಪ್ರಖ್ಯಾತ ಆನಂದ್ ಗುರೂಜಿಗೆ ಪ್ರತಿನಿತ್ಯ ಹಣಕ್ಕಾಗಿ ಆರೋಪಿಗಳು ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ. ಕೋರ್ಟ್ನಿಂದ ತಡೆಯಾಜ್ಞೆ ತಂದರೂ ಹಣಕ್ಕಾಗಿ ಬೆದರಿಸಿ ಬ್ಲ್ಯಾಕ್ ಮೇಲ್, ಜೀವಬೆದರಿಕೆ ಹಾಕಿದ್ದಾರೆ. ಅಲ್ಲದೇ ಕಾರು ಅಡ್ಡಗಟ್ಟಿ ಅಶ್ಲೀಲ ಪದಗಳಿಂದ ನಿಂದನೆ ಮಾಡಿದ್ದಾರೆ ಎಂದು ವಿನಯ್ ಗುರೂಜಿ ದೂರಿನಲ್ಲಿ ಆರೋಪಿಸಿದ್ದಾರೆ. ಸದ್ಯ ಚಿಕ್ಕಜಾಲ ಠಾಣೆ ಪೊಲೀಸರು ತನಿಖೆ ನಡೆಸಿದ್ದಾರೆ.
ಅಶ್ಲೀಲ ವೀಡಿಯೋಗಳನ್ನ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡುವುದಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ. ಹಲವಾರು ಯುಟ್ಯೂಬ್ ಚಾನೆಲ್ ಗಳ ಮೂಲಕ ಮಾನಹಾನಿ ಮಾಡಿದ್ದಾರೆ. ಮುಖವಾಡ, ಸಾಮ್ರಾಟ್ ಹೆಸರಿನ ಯೂಟ್ಯೂಬ್ ಚಾನೆಲ್ ಗಳಲ್ಲೂ ಚಾರಿತ್ರ್ಯ ತೇಜೋವಧೆ ಮಾಡಿದ್ದಾರೆ ಎಂದು ಆನಂದ ಗುರೂಜಿ ಆರೋಪಿಸಿದ್ದಾರೆ.
ದಿವ್ಯಾ ವಸಂತ್ ವಿರುದ್ಧ ಈ ಹಿಂದೆ ಹನಿಟ್ರ್ಯಾಪ್ ಪ್ರಕರಣದಲ್ಲಿ ಬಂಧನವಾಗಿದ್ದಳು. ಇಂದಿರಾ ನಗರದ ಬ್ಯೂಟಿ ಪಾರ್ಲರ್ ನಲ್ಲಿ ಸ್ಟಿಂಗ್ ಆಪರೇಷನ್ ನಡೆಸಿ ಬಳಿಕ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಿದ್ದಳು, ಈ ಸಂಬಂಧ ಪಾರ್ಲರ್ ಮಾಲೀಕರು ನೀಡಿದ್ದ ಹನಿಟ್ರ್ಯಾಪ್ ದೂರಿನ ಮೇರೆಗೆ ದಿವ್ಯಾ ವಸಂತಳನ್ನು ಪೊಲೀಸರು ಕೇರಳದಲ್ಲಿ ಬಂಧಿಸಿದ್ದರು.
ಕಾಮೆಂಟ್ ಬಿಡಿ