ಜಿಲ್ಲಾ ಸುದ್ದಿಗಳು

ಕೇರಳ – ಬೆಂಕಿಗಾಹುತಿಯಾಗಿರುವ ಸಿಂಗಾಪುರದ ಹಡಗಿನಲ್ಲಿ ಗಾಯಗೊಂಡವರಿಗೆ ಮಂಗಳೂರಿನಲ್ಲಿ ಚಿಕಿತ್ಸೆ

ಮಂಗಳೂರು: ಕೇರಳದ ಕೋಯಿಕ್ಕೋಡ್‌ ಬೇಪೂರ್‌ ಭಾಗದ ಸಮುದ್ರದಲ್ಲಿ ಬೆಂಕಿ ಕಾಣಿಸಿಕೊಂಡ ಎಂವಿ ವ್ಯಾನ್‌ ಹೈ 503 ಹಡಗಿನಲ್ಲಿದ್ದ ಗಾಯಗೊಂಡ, ಸುರಕ್ಷಿತರಾಗಿ ಬಂದ ಸಿಬ್ಬಂದಿಯನ್ನು ಕರೆದುಕೊಂಡು ಬಂದ ಐಎನ್‌ಎಸ್‌ ಸೂರತ್‌ ಹಡಗು ಸೋಮವಾರ ರಾತ್ರಿ ಮಂಗಳೂರು ತಲುಪಿದೆ.

10.45 ರ ಸಮಯಕ್ಕೆ ತಲುಪಿದ ಹಡಗಿನಲ್ಲಿದ್ದ 18 ಮಂದಿಯ ಪೈಕಿ ಗಂಭೀರ ಗಾಯಗೊಂಡ ಇಬ್ಬರು ಸೇರಿ ಆರು ಮಂದಿಯನ್ನು ಕರಾವಳಿ ಕಾವಲು ಪಡೆಯ ಸಿಬ್ಬಂದಿಯ ನೆರವಿನ ಜೊತೆಗೆ ಆಂಬುಲೆನ್ಸ್‌ನಲ್ಲಿ ಕುಂಟಿಕಾನದ ಎಜೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಬ್ಬರು ಗಂಭಿರ ಸ್ಥಿತಿಯಲ್ಲಿದ್ದು, ಸ್ಟ್ರಚರ್‌ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ನಾಲ್ವರು ನಡೆದುಕೊಂಡು ಹೋಗಿದ್ದಾರೆ. ಗಾಯಗಳಿಲ್ಲದವರನ್ನು ಹೋಟೆಲ್‌ನಲ್ಲಿ ಇರಿಸಲಾಗಿದೆ ಎಂದು ನಗರ ಪೊಲೀಸರು ತಿಳಿಸಿರುವ ಕುರಿತು ವರದಿಯಾಗಿದೆ.

ಕಾಮೆಂಟ್ ಬಿಡಿ

Join Us