ಜಿಲ್ಲಾ ಸುದ್ದಿಗಳು

ಮುಳೂರು: ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ;ವಾಹನದ ಚಕ್ರಗಳ ಅಡಿಗೆ ಸಿಲುಕಿ ಸ್ಥಳದಲ್ಲೇ ಸಾವು

ಉಡುಪಿ: ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಹೆದ್ದಾರಿ ದಾಟುತ್ತಿದ್ದ ಪಾದಚಾರಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಮುಳೂರಿನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.

ಮೃತಪಟ್ಟವರನ್ನು ಮುಳೂರು ಫಿಶರೀಸ್ ರಸ್ತೆಯ ನಿವಾಸಿ ಧನಂಜಯ್ ಎ ಸುವರ್ಣ (43) ಎಂದು ಗುರುತಿಸಲಾಗಿದೆ. ಮುಳೂರು ಬಾರ್ ಬಳಿ ಈ ಘಟನೆ ನಡೆದಿದ್ದು, ಧನಂಜಯ್ ಹೆದ್ದಾರಿ ದಾಟಲು ರಸ್ತೆ ವಿಭಜಕದಲ್ಲಿ ನಿಂತಿದ್ದರು ಎನ್ನಲಾಗಿದೆ.

ಮಂಗಳೂರಿನಿಂದ ಉಡುಪಿಗೆ ಬರುತ್ತಿದ್ದ ಲಾರಿಯೊಂದು ಅತಿ ವೇಗವಾಗಿ ಬಂದು ಪಾದಚಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಧನಂಜಯ್ ರಸ್ತೆಗೆ ಬಿದ್ದಿದ್ದು, ವಾಹನದ ಚಕ್ರಗಳ ಅಡಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಅಪಘಾತದ ನಂತರ ಲಾರಿ ಚಾಲಕ ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದ್ದಾನೆ. ವಾಹನ ಮತ್ತು ಚಾಲಕನನ್ನುಪತ್ತೆಹಚ್ಚಲು ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.ಮುಳೂರು ಸೇರಿದಂತೆ ಸ್ಥಳೀಯ ಸ್ವಯಂಸೇವಕರ ನೆರವಿನೊಂದಿಗೆ ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಲಾಯಿತು.

ಕಾಮೆಂಟ್ ಬಿಡಿ

Join Us