ವಿಮಾನ ದುರಂತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ರಮೇಶ್ ವಿಶ್ವಾಸ್
ಅಹಮದಾಬಾದ್: ಗುಜರಾತ್ನ ಅಹಮದಾಬಾದ್ನಲ್ಲಿ ನಡೆದ ಭೀಕರ ವಿಮಾನ ಅಪಘಾತವು ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಅಹಮದಾಬಾದ್ನಿಂದ ಲಂಡನ್ಗೆ ಹಾರಿದ್ದು ಏರ್ ಇಂಡಿಯಾ ವಿಮಾನ AI-171, ಟೇಕ್ ಆಫ್ ಆದ ಕೆಲವೇ ಸೆಕೆಂಡುಗಳಲ್ಲಿ ಮೇಘಾನಿನಗರದ ವಸತಿ ಪ್ರದೇಶದಲ್ಲಿ ಅಪಘಾತಕ್ಕೀಡಾಯಿತು. ಆದರೆ 40 ವರ್ಷದ ರಮೇಶ್ ವಿಶ್ವಾಸ್ ಕುಮಾರ್ ಸಾವನ್ನು ಸೋಲಿಸುವ ಮೂಲಕ ಪವಾಡವನ್ನು ಸೃಷ್ಟಿಸಿದರು. ವಿನಾಶ ಮತ್ತು ಶೋಕದ ನಡುವೆ ಬದುಕುಳಿದ ಏಕೈಕ ವ್ಯಕ್ತಿಯಾಗಿದ್ದಾರೆ.
ರಮೇಶ್ ಮಾಧ್ಯಮಗಳಿಗೆ: "ಟೇಕ್ ಆಫ್ ಆದ 30 ಸೆಕೆಂಡುಗಳ ನಂತರ, ದೊಡ್ಡ ಸ್ಫೋಟ ಸಂಭವಿಸಿತು. ವಿಮಾನ ಗಾಳಿಯಲ್ಲಿ ಒದ್ದಾಡಿತು ಮತ್ತು ನಂತರ ನೆಲಕ್ಕೆ ಅಪ್ಪಳಿಸಿತು. ನಾನು ಕಣ್ಣು ತೆರೆದಾಗ, ಸುತ್ತಲೂ ಶವಗಳು ಮತ್ತು ಅವಶೇಷಗಳು ಇದ್ದವು. ನಾನು ಭಯಭೀತನಾಗಿದ್ದೆ, ಆದರೆ ಹೇಗೋ ಸೀಟಿನಿಂದ ಎದ್ದು ಉರಿಯುತ್ತಿರುವ ಅವಶೇಷಗಳಿಂದ ಹೊರಗೆ ಓಡಿಹೋದೆ. ಈ ವೇಳೆ ಮುಖ ಮತ್ತು ಕಾಲುಗಳ ಮೇಲೆ ಗಂಭೀರ ಗಾಯಗಳಾಗಿದ್ದರೂ, ಅವರು ಕುಂಟುತ್ತಾ ಸ್ಥಳದಿಂದ ಹೊರಬಂದರು.
ಆರಂಭಿಕ ತನಿಖೆಗಳು ಎಂಜಿನ್ ವೈಫಲ್ಯವೇ ಕಾರಣ ಎಂದು ಉಲ್ಲೇಖಿಸಿವೆ. ರಮೇಶ್ ಅವರ ಕಥೆ ಜನರನ್ನು ಬೆಚ್ಚಿಬೀಳಿಸಿದೆ.ಆದರೆ ರಮೇಶ್ ಅವಶೇಷಗಳಿಂದ ಹೊರಬರುತ್ತಿರುವುದನ್ನು ತೋರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಜನರು ಇದನ್ನು "ಮುಖದ್ದರ್ ಕಾ ಸಿಕಂದರ್" ಎಂದು ಕರೆದಿದ್ದಾರೆ. "ನಾನು ಹೇಗೆ ಬದುಕುಳಿದೆ ಎಂದು ನನಗೆ ತಿಳಿದಿಲ್ಲ, ಬಹುಶಃ ಅದು ದೇವರ ಇಚ್ಛೆಯಾಗಿರಬಹುದು. ನನ್ನ ಸಹೋದರ ಸಹ ವಿಮಾನದಲ್ಲಿದ್ದು ಆತನನ್ನು ಹುಡುಕಲು ಬಯಸುತ್ತೇನೆ, ಅವನು ನನ್ನು ಜೊತೆ ಇದ್ದನು ಎಂದು ರಮೇಶ್ ಹೇಳಿದರು.
ಪೊಲೀಸ್ ಆಯುಕ್ತರ ಪ್ರಕಾರ, ರಮೇಶ್ ಮತ್ತು ಇನ್ನೊಬ್ಬ ಪ್ರಯಾಣಿಕ ಮಾತ್ರ ಅಪಘಾತದಿಂದ ಬದುಕುಳಿದಿದ್ದಾರೆ. ಇನ್ನೊಬ್ಬ ಪ್ರಯಾಣಿಕ ಆಸ್ಪತ್ರೆಯಲ್ಲಿದ್ದಾರೆ. ವಿಮಾನದ ಎಮೆರ್ಜೆನ್ಸಿ ವಿಂಡೋದಿಂದ ಜಿಗಿದು ಪ್ರಾಣ ಉಳಿಸಿಕೊಂಡ ಪ್ರಯಾಣಿಕ.
ಈ ಅಪಘಾತವು ಭಾರತದಲ್ಲಿ ನಡೆದ ಅತ್ಯಂತ ಮಾರಕ ವಿಮಾನ ಅಪಘಾತಗಳಲ್ಲಿ ಒಂದಾಗಿದೆ.ಇದರಲ್ಲಿ 242 ಪ್ರಯಾಣಿಕರ ಪೈಕಿ 241 ಮಂದಿ ಸಾವನ್ನಪ್ಪಿದ್ದಾರೆ.
ಕಾಮೆಂಟ್ ಬಿಡಿ