Helicopter crash:ಕೇದಾರನಾಥ ಧಾಮಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಪತನ 6 ಮಂದಿ ದುರ್ಮರಣ
ಉತ್ತರಾಖಂಡ: ಅಹ್ಮದಾಬಾದ್ನಲ್ಲಿ ವಿಮಾನ ಪತನಗೊಂಡು 246 ಜನ ಬಲಿಯಾಗಿರುವ ಘಟನೆ ಮಾಸುವ ಮುನ್ನವೇ ಕೇದಾರನಾಥದಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಕೇದಾರನಾಥ ಧಾಮಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಪತನಗೊಂಡು 6 ಮಂದಿ ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕೇದಾರನಾಥ ಧಾಮಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಕಾಡಿನಲ್ಲಿ ಪತನಗೊಂಡು ಐದು ಜನರು ಸಾವನ್ನಪ್ಪಿದ್ದಾರೆ. ಆರ್ಯನ್ ಏವಿಯೇಷನ್ ಹೆಲಿಕಾಪ್ಟರ್ ಗುಪ್ತಕಾಶಿಯಿಂದ ಕೇದಾರನಾಥ ಧಾಮಕ್ಕೆ ಯಾತ್ರಿಕ ಹೊತ್ತೊಯ್ಯುತ್ತಿತ್ತು. 10 ನಿಮಿಷಗಳ ಪ್ರಯಾಣದ ಸಮಯದಲ್ಲಿ, ಹೆಲಿಕಾಪ್ಟರ್ ಗೌರಿಕುಂಡ್ ಮತ್ತು ಸೋನ್ಪ್ರಯಾಗ್ ನಡುವೆ ಅಪಘಾತಕ್ಕೀಡಾಯಿತು. ಇನ್ನು ಈ ದುರಂತದಲ್ಲಿ ಹೆಲಿಕಾಪ್ಟರ್ನಲ್ಲಿದ್ದ 6 ಮಂದಿ ಯಾತ್ರಿಕರು ದಾರುಣ ಸಾವನ್ನಪ್ಪಿದ್ದಾರೆ.
ಅಪಘಾತದಲ್ಲಿ ಮೃತಪಟ್ಟವರಲ್ಲಿ ಪೈಲಟ್ ಕೂಡ ಸೇರಿದ್ದಾರೆ. ತೆರೆದ ಮೈದಾನದಲ್ಲಿ ಹೆಲಿಕಾಪ್ಟರ್ ನ ಅವಶೇಷಗಳು ಬೆಂಕಿಗೆ ಆಹುತಿಯಾಗಿರುವುದನ್ನು ದೃಶ್ಯಗಳು ತೋರಿಸಿವೆ. ದೇವಾಲಯಕ್ಕೆ ಹೋಗುವಾಗ ಗೌರಿಕುಂಡ್ ಮತ್ತು ತ್ರಿಯುಗಿನಾರಾಯಣ ನಡುವೆ ಅಪಘಾತ ಸಂಭವಿಸಿದೆ.
ಕಾಮೆಂಟ್ ಬಿಡಿ