ದೇಶ

Helicopter crash:ಕೇದಾರನಾಥ ಧಾಮಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್‌ ಪತನ 6 ಮಂದಿ ದುರ್ಮರಣ

ಉತ್ತರಾಖಂಡ: ಅಹ್ಮದಾಬಾದ್‌ನಲ್ಲಿ ವಿಮಾನ ಪತನಗೊಂಡು 246 ಜನ ಬಲಿಯಾಗಿರುವ ಘಟನೆ ಮಾಸುವ ಮುನ್ನವೇ ಕೇದಾರನಾಥದಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಕೇದಾರನಾಥ ಧಾಮಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್‌ ಪತನಗೊಂಡು 6 ಮಂದಿ ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕೇದಾರನಾಥ ಧಾಮಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಕಾಡಿನಲ್ಲಿ ಪತನಗೊಂಡು ಐದು ಜನರು ಸಾವನ್ನಪ್ಪಿದ್ದಾರೆ. ಆರ್ಯನ್ ಏವಿಯೇಷನ್ ​​ಹೆಲಿಕಾಪ್ಟರ್ ಗುಪ್ತಕಾಶಿಯಿಂದ ಕೇದಾರನಾಥ ಧಾಮಕ್ಕೆ ಯಾತ್ರಿಕ ಹೊತ್ತೊಯ್ಯುತ್ತಿತ್ತು. 10 ನಿಮಿಷಗಳ ಪ್ರಯಾಣದ ಸಮಯದಲ್ಲಿ, ಹೆಲಿಕಾಪ್ಟರ್ ಗೌರಿಕುಂಡ್ ಮತ್ತು ಸೋನ್‌ಪ್ರಯಾಗ್ ನಡುವೆ ಅಪಘಾತಕ್ಕೀಡಾಯಿತು. ಇನ್ನು ಈ ದುರಂತದಲ್ಲಿ ಹೆಲಿಕಾಪ್ಟರ್‌ನಲ್ಲಿದ್ದ 6 ಮಂದಿ ಯಾತ್ರಿಕರು ದಾರುಣ ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ಮೃತಪಟ್ಟವರಲ್ಲಿ ಪೈಲಟ್ ಕೂಡ ಸೇರಿದ್ದಾರೆ. ತೆರೆದ ಮೈದಾನದಲ್ಲಿ ಹೆಲಿಕಾಪ್ಟರ್ ನ ಅವಶೇಷಗಳು ಬೆಂಕಿಗೆ ಆಹುತಿಯಾಗಿರುವುದನ್ನು ದೃಶ್ಯಗಳು ತೋರಿಸಿವೆ. ದೇವಾಲಯಕ್ಕೆ ಹೋಗುವಾಗ ಗೌರಿಕುಂಡ್ ಮತ್ತು ತ್ರಿಯುಗಿನಾರಾಯಣ ನಡುವೆ ಅಪಘಾತ ಸಂಭವಿಸಿದೆ.

ಕಾಮೆಂಟ್ ಬಿಡಿ

Join Us